Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:6 - ಪರಿಶುದ್ದ ಬೈಬಲ್‌

6 “ಕೆಲವು ವರ್ಷಗಳಾದ ಮೇಲೆ ದಕ್ಷಿಣ ದಿಕ್ಕಿನ ರಾಜನು ಮತ್ತು ಆ ಸೇನಾಧಿಪತಿಯು ಒಂದು ಒಪ್ಪಂದವನ್ನು ಮಾಡಿಕೊಳ್ಳುವರು. ದಕ್ಷಿಣದ ರಾಜನ ಮಗಳು ಉತ್ತರದ ರಾಜನನ್ನು ಮದುವೆಯಾಗುವಳು. ಶಾಂತಿಯನ್ನು ಸ್ಥಾಪಿಸುವದಕ್ಕಾಗಿ ಅವಳು ಹೀಗೆ ಮಾಡುವಳು. ಆದರೆ ಅವಳು ಮತ್ತು ದಕ್ಷಿಣದ ರಾಜನು ಸಾಕಷ್ಟು ಶಕ್ತಿಶಾಲಿಗಳಾಗಿರುವುದಿಲ್ಲ. ಜನರು ಅವಳನ್ನೂ ಮತ್ತು ಆ ದೇಶಕ್ಕೆ ಅವಳನ್ನು ಕರೆದುಕೊಂಡು ಹೋದ ವ್ಯಕ್ತಿಯನ್ನೂ ವಿರೋಧ ಮಾಡುವರು. ಆ ಜನರು ಅವಳ ಮಗು ಮತ್ತು ಅವಳ ಸಹಾಯಕನನ್ನು ವಿರೋಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕೆಲವು ವರ್ಷಗಳಾದ ಮೇಲೆ ಅವರು ಒಪ್ಪಂದ ಮಾಡಿಕೊಳ್ಳುವರು. ಇದನ್ನು ದೃಢಪಡಿಸಿಕೊಳ್ಳಲು ಆ ದಕ್ಷಿಣ ರಾಜನ ಕುಮಾರಿ ಉತ್ತರ ದಿಕ್ಕಿನ ರಾಜನನ್ನು ಸೇರುವಳು. ಆದರೂ ತನ್ನ ಸಂಬಂಧವನ್ನು ಉಳಿಸಿಕೊಳ್ಳನು. ಅವನೂ ಅವನ ಸಂತಾನವೂ ನಿಲ್ಲವು. ಅವಳು, ಅವಳನ್ನು ಕರೆತಂದವರು, ಪಡೆದವನು, ಕರೆದುಕೊಂಡವನು ಇವರೆಲ್ಲರೂ ಅಂದು ನಾಶಕ್ಕೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೆಲವು ವರುಷಗಳ ಮೇಲೆ ಅವರು ಸೇರಿಕೊಳ್ಳುವರು; ದಕ್ಷಿಣರಾಜನ ಕುಮಾರಿಯು ಉತ್ತರದಿಕ್ಕಿನ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು; ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಳು; ಅವನೂ ಅವನ ತೋಳೂ ನಿಲ್ಲವು; ಅವಳೂ ಅವಳನ್ನು ಕರತಂದವರೂ ಪಡೆದವನೂ ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:6
9 ತಿಳಿವುಗಳ ಹೋಲಿಕೆ  

ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಈ ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ಧಾಳಿಮಾಡುವನು. ಆ ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಆ ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ಆಮೇಲೆ ಉತ್ತರದ ರಾಜನು ಬಂದು ಗೋಡೆಗಳಿಗೆ ದಿಬ್ಬಹಾಕಿ ಒಂದು ಭದ್ರವಾದ ನಗರವನ್ನು ವಶಪಡಿಸಿಕೊಳ್ಳುವನು. ದಕ್ಷಿಣದವರಲ್ಲಿ ಹೋರಾಡುವ ಶಕ್ತಿ ಇರುವದಿಲ್ಲ. ದಕ್ಷಿಣ ಸೈನ್ಯದ ಉತ್ತಮ ಸೈನಿಕರೂ ಕೂಡ ಉತ್ತರದ ಸೈನ್ಯವನ್ನು ತಡೆದು ನಿಲ್ಲಿಸಲು ಸಮರ್ಥರಾಗುವದಿಲ್ಲ.


“ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.


ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”


“ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು.”


ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.


ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು