Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:1 - ಪರಿಶುದ್ದ ಬೈಬಲ್‌

1 “ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:1
48 ತಿಳಿವುಗಳ ಹೋಲಿಕೆ  

“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.


ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.


ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.


ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.


ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.


ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.


ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.


ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.


ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.


ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು