Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:3 - ಪರಿಶುದ್ದ ಬೈಬಲ್‌

3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:3
27 ತಿಳಿವುಗಳ ಹೋಲಿಕೆ  

ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


“ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು.


ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.


ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”


ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.


“ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ಜ್ಞಾನಿಗಳು ಸನ್ಮಾನ ಹೊಂದುವರು; ಮೂಢರಿಗೆ ಅವಮಾನವಾಗುವುದು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ತನ್ನ ಮುಖಕ್ಕೆ ಮುಸುಕು ಹಾಕಿಕೊಂಡಿರುವನು.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ಪ್ರಸಂಗಿಯು ತುಂಬ ಜ್ಞಾನಿಯಾಗಿದ್ದನು. ಪ್ರಸಂಗಿಯು ಅನೇಕ ಜ್ಞಾನೋಪದೇಶಗಳನ್ನು ತುಂಬ ಎಚ್ಚರಿಕೆಯಿಂದ ಅಧ್ಯಯನ ಮಾಡಿ ಕ್ರಮಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು