Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:19 - ಪರಿಶುದ್ದ ಬೈಬಲ್‌

19 ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:19
16 ತಿಳಿವುಗಳ ಹೋಲಿಕೆ  

ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಯಲ್ಲಿರುವಾಗ


ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.


ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.


ಆಗ ಇಸ್ರೇಲರಿಗೆ ಸಮಾಧಾನವಾಯಿತು. ಅವರು ಸಂತೋಷಪಟ್ಟು ದೇವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಅವರು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆ ಕುಲದವರೊಡನೆ ಯುದ್ಧ ಮಾಡಬಾರದೆಂದೂ ಅವರು ವಾಸಮಾಡುತ್ತಿರುವ ಪ್ರದೇಶವನ್ನು ನಾಶಮಾಡಬಾರದೆಂದೂ ನಿರ್ಧರಿಸಿದರು.


“ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು.


ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು