Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:2 - ಪರಿಶುದ್ದ ಬೈಬಲ್‌

2 ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನಿಗೆ ನಿದ್ರೆ ತಪ್ಪಿತು. ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿಸಲೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:2
16 ತಿಳಿವುಗಳ ಹೋಲಿಕೆ  

ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.


ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು.


ಆಗ ರಾಜನು ತನ್ನ ವಿಧ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು.


ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಕಸ್ದೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಈ ಜಗತ್ತಿನಲ್ಲಿ ಯಾರೂ ಇಲ್ಲ. ಈ ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ. ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲಿ ಜೋಯಿಸರಿಗಾಗಲಿ ಇಂಥದ್ದನ್ನು ಕೇಳಲಿಲ್ಲ.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು.


ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.


ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಅರಸನಾದ ನಿನಗೆ ರಹಸ್ಯವನ್ನು ಹೇಳಲಾಗಲಿಲ್ಲ.


ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು.


ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.


ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು