Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:26 - ಪರಿಶುದ್ದ ಬೈಬಲ್‌

26 ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ರಾಜನು ಬೇಲ್ತೆಶಚ್ಚರನೆಂಬ ಅಡ್ಡ ಹೆಸರಿನ ದಾನಿಯೇಲನನ್ನು - ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:26
9 ತಿಳಿವುಗಳ ಹೋಲಿಕೆ  

ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.


ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.


ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.


ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.


ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು