Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:30 - ಪರಿಶುದ್ದ ಬೈಬಲ್‌

30 ದೇವರು ರಹಸ್ಯವನ್ನು ನನಗೂ ತಿಳಿಸಿದ್ದಾನೆ! ದೇವರು ನನಗೆ ತಿಳಿಸಿರುವುದು ನಾನು ಬೇರೆಯವರಿಗಿಂತ ಹೆಚ್ಚು ಬುದ್ಧಿವಂತನೆಂದಲ್ಲ. ಆದರೆ ಅರಸನಾದ ನಿನಗೆ ಇದರ ಅರ್ಥ ತಿಳಿಯಲಿ ಎಂಬ ಉದ್ದೇಶದಿಂದ ದೇವರು ನನಗೆ ತಿಳಿಸಿದ್ದಾನೆ. ಇದರಿಂದ ನಿನ್ನ ಮನಸ್ಸಿನ ಯೋಚನೆಗಳ ವಿಷಯ ನಿನಗೆ ತಿಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ಗುಟ್ಟನ್ನು ನನಗೂ ವ್ಯಕ್ತಪಡಿಸಿದ್ದಾರೆ. ನಾನು ಎಲ್ಲ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನು ಎಂದೇನೂ ಅಲ್ಲ. ಆ ಕನಸಿನ ಉದ್ದೇಶ ರಾಜರಾದ ತಮಗೆ ಗೋಚರವಾಗಿ ನಿಮ್ಮ ಮನದಾಲೋಚನೆಗಳು ನಿಮಗೆ ಅರ್ಥವಾಗಲಿ ಎಂದು ನನಗೂ ವ್ಯಕ್ತಪಡಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:30
16 ತಿಳಿವುಗಳ ಹೋಲಿಕೆ  

ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.


ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?


ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು.


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.


ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು