Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:40 - ಪರಿಶುದ್ದ ಬೈಬಲ್‌

40 ಆಮೇಲೆ ನಾಲ್ಕನೆಯ ರಾಜ್ಯ. ಆ ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ಆ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಾಲ್ಕನೆಯ ರಾಜ್ಯ ಕಬ್ಬಿಣದಷ್ಟು ಗಟ್ಟಿಗೆ ಕಬ್ಬಿಣ ಎಲ್ಲ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದೆ. ಅಂತೆಯೇ ಅದು ಎಲ್ಲವನ್ನು ಚೂರುಚೂರಾಗಿಸಿ ಧ್ವಂಸ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದಷ್ಟೆ; ಸಕಲವನ್ನೂ ದ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ದ್ವಂಸಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:40
12 ತಿಳಿವುಗಳ ಹೋಲಿಕೆ  

“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.


ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.


ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.


ಕಾಲುಗಳು ಕಬ್ಬಿಣದಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಪಾದಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಲಾಗಿದ್ದವು.


“ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು. ಉತ್ತರದಿಂದ ಬರುವವನು ಕಬ್ಬಿಣದಂತಿದ್ದಾನೆ.


ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.


“ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.


“ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು