ದಾನಿಯೇಲ 2:48 - ಪರಿಶುದ್ದ ಬೈಬಲ್48 ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿ |
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.
ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.