6 ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.
6 ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
6 ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.
6 ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು -
6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.
ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.
ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.
ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಸುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ. ನೀನು ಆಗಲೇ ಯಾಕೆ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ನೀನು ಭಾವಿಸಿಕೊಂಡಿರುವಿಯಾ?” ಎಂದು ಕೇಳಿದನು.
ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.