Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:13 - ಪರಿಶುದ್ದ ಬೈಬಲ್‌

13 ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:13
15 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು.


“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.


ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.


“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.


ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.


ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು.


ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ.


ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.


ಆದರೆ ಕಾಯಿನನ ಕಾಣಿಕೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಕಾಯಿನನು ದುಃಖಿತನಾದನು ಮತ್ತು ಬಹಳ ಕೋಪಗೊಂಡನು.


ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು