Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:22 - ಪರಿಶುದ್ದ ಬೈಬಲ್‌

22 ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಾಗಲು ರಾಜಾಜ್ಞೆಯು ಖಂಡಿತವಾಗಿದದ್ದರಿಂದಲೂ ಆವಿಗೆಯ ಕಾವು ಅತಿತೀಕ್ಷ್ಣವಾಗಿದ್ದದರಿಂದಲೂ ಅಗ್ನಿಜ್ವಾಲೆಯು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಎತ್ತಿಹಾಕಿದವರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:22
10 ತಿಳಿವುಗಳ ಹೋಲಿಕೆ  

ಒಳ್ಳೆಯವರ ಬದಲಾಗಿ ಕೆಡುಕರು ಸಂಕಟಪಡುವರು. ನೀತಿವಂತರ ಬದಲಾಗಿ ದ್ರೋಹಿಗಳು ಸಂಕಟಪಡುವರು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.


ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.


ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.


ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.


ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.


ದಾನಿಯೇಲನು ಅರ್ಯೋಕನಿಗೆ, “ಅರಸನು ಅಂತಹ ಕಠಿಣ ಶಿಕ್ಷೆಯನ್ನು ಏಕೆ ಆಜ್ಞಾಪಿಸಿದನು?” ಎಂದು ಕೇಳಿದನು. ಆಗ ಅರ್ಯೋಕನು ಅರಸನ ಕನಸಿಗೆ ಸಂಬಂಧಿಸಿದ ಎಲ್ಲಾ ವಿಷಯವನ್ನು ವಿವರಿಸಿದನು.


ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.


ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು