Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:12 - ಪರಿಶುದ್ದ ಬೈಬಲ್‌

12 ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದರ ಎಲೆಗಳು ಚೆಲುವಾಗಿದ್ದವು. ಅದು ಹಣ್ಣುಗಳಿಂದ ತುಂಬಿತ್ತು. ಅದರಿಂದ ಎಲ್ಲಕ್ಕೂ ಆಹಾರ, ವನ್ಯಮೃಗಗಳಿಗೆ ಅದರ ನೆರಳಿನಲ್ಲಿ ಆಶ್ರಯ, ಆಕಾಶದ ಪಕ್ಷಿಗಳಿಗೆ ಅದರ ಕೊಂಬೆಗಳಲ್ಲಿ ನೆಲೆ, ಎಲ್ಲಾ ಪ್ರಾಣಿಗಳಿಗೂ ಅದರಿಂದ ಪೋಷಣೆ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಅದರಿಂದ ಎಲ್ಲಕ್ಕೂ ಆಹಾರ, ನೆರಳು ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:12
13 ತಿಳಿವುಗಳ ಹೋಲಿಕೆ  

ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.


ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


“ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ.


ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”


ಆದರೆ ನೀವು ಈ ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.


ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.


ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.


ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.


“ಮರಕ್ಕೆ ನಿರೀಕ್ಷೆಯಿದೆ. ಕಡಿದುಹಾಕಲ್ಪಟ್ಟರೂ ಅದು ಮತ್ತೆ ಚಿಗುರಬಹುದು; ಹೊಸ ಕವಲುಗಳನ್ನು ಮೊಳೆಯಿಸುತ್ತಲೇ ಇರುವುದು.


ಅದು ನೀರಿನಿಂದ ಮತ್ತೆ ಹೊಸದಾಗಿ ಬೆಳೆಯುವುದು; ಎಳೆ ಗಿಡದಂತೆ ಕವಲೊಡೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು