Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:13 - ಪರಿಶುದ್ದ ಬೈಬಲ್‌

13 “ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:13
18 ತಿಳಿವುಗಳ ಹೋಲಿಕೆ  

ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.


ಆದಾಮನ ಏಳನೆಯ ತಲೆಮಾರಿನವನಾದ ಹನೋಕನು ಈ ಜನರನ್ನು ಕುರಿತು ಹೀಗೆ ಹೇಳಿದ್ದಾನೆ: “ಇಗೋ, ಪ್ರಭುವು ತನ್ನ ಲಕ್ಷಾಂತರ ಪರಿಶುದ್ಧ ದೂತರೊಂದಿಗೆ ಬರುತ್ತಿದ್ದಾನೆ.


ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.


“ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.


ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.


ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


“ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


“ಅವನು ನನಗೆ ಈ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು.


ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು.


ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು