Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:14 - ಪರಿಶುದ್ದ ಬೈಬಲ್‌

14 ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:14
19 ತಿಳಿವುಗಳ ಹೋಲಿಕೆ  

ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


“ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.


ಮರಗಳನ್ನು ಕಡಿಯುವುದಕ್ಕೆ ಕೊಡಲಿಯು ಸಿದ್ಧವಾಗಿದೆ. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನು ಕತ್ತರಿಸಿ ಬೆಂಕಿಯಲ್ಲಿ ಹಾಕಲಾಗುವುದು” ಎಂದು ಹೇಳಿದನು.


ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು.


ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.


ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ.


ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”


ಸಿಂಹ ಗರ್ಜಿಸುವಂತೆ ಗಟ್ಟಿಯಾಗಿ ಆರ್ಭಟಿಸಿದನು. ಆ ಬಳಿಕ ಏಳು ಗುಡುಗುಗಳ ಧ್ವನಿಯು ಮಾತನಾಡಿತು.


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮರ್ಥ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು.


ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು