Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:18 - ಪರಿಶುದ್ದ ಬೈಬಲ್‌

18 “ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:18
14 ತಿಳಿವುಗಳ ಹೋಲಿಕೆ  

ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.


ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.


ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ.


ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಆ ಪಂಡಿತರು ಅರಸನಿಗೆ, “ದಯವಿಟ್ಟು ತಾವು ಕನಸಿನ ಬಗ್ಗೆ ಹೇಳಿರಿ. ನಾವು ಅದರ ಅಭಿಪ್ರಾಯವನ್ನು ಹೇಳುತ್ತೇವೆ” ಎಂದರು.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.


ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.


ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು