ದಾನಿಯೇಲ 4:19 - ಪರಿಶುದ್ದ ಬೈಬಲ್19 ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ. ಅಧ್ಯಾಯವನ್ನು ನೋಡಿ |
ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.