ದಾನಿಯೇಲ 4:34 - ಪರಿಶುದ್ದ ಬೈಬಲ್34 ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.