Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:1 - ಪರಿಶುದ್ದ ಬೈಬಲ್‌

1 ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಮಾಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:1
11 ತಿಳಿವುಗಳ ಹೋಲಿಕೆ  

ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.


ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.


ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.


ಯೆಹೋವನು ಹೀಗೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು!


ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು