ದಾನಿಯೇಲ 5:20 - ಪರಿಶುದ್ದ ಬೈಬಲ್20 “ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು. ಅಧ್ಯಾಯವನ್ನು ನೋಡಿ |
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.