Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:28 - ಪರಿಶುದ್ದ ಬೈಬಲ್‌

28 ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:28
16 ತಿಳಿವುಗಳ ಹೋಲಿಕೆ  

ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು.


ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.


ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು.


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.


“ನೀನು ಎರಡು ಕೊಂಬುಗಳುಳ್ಳ ಒಂದು ಟಗರನ್ನು ನೋಡಿದೆ. ಆ ಕೊಂಬುಗಳು ಮೇದ್ಯಯ ಮತ್ತು ಪಾರಸಿಯ ರಾಜ್ಯಗಳು.


ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,


ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.”


ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ: ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.


ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.


ಆ ಪ್ರತಿಮೆಯ ತಲೆಯನ್ನು ಚೊಕ್ಕ ಚಿನ್ನದಿಂದ ಮಾಡಲಾಗಿತ್ತು. ಅದರ ಎದೆ ಮತ್ತು ತೋಳುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಹೊಟ್ಟೆ, ಸೊಂಟ ಮತ್ತು ತೊಡೆಗಳು ಕಂಚಿನಿಂದ ಮಾಡಲ್ಪಟ್ಟಿದ್ದವು.


“ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು