Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:25 - ಪರಿಶುದ್ದ ಬೈಬಲ್‌

25 ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:25
14 ತಿಳಿವುಗಳ ಹೋಲಿಕೆ  

ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು,


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.


ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.


ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.


ನಿಮಗೆ ಕರುಣೆ, ಶಾಂತಿ ಮತ್ತು ಪ್ರೀತಿ ಹೆಚ್ಚಾಗಲಿ.


ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.


ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ.


ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು.


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು