Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:3 - ಪರಿಶುದ್ದ ಬೈಬಲ್‌

3 ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದದರಿಂದ ಅವನು ವಿುಕ್ಕ ಮುಖ್ಯಾಧಿಕಾರಿಗಳಿಗಿಂತಲೂ ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು; ಅವನನ್ನು ರಾಜನು ಪೂರ್ಣರಾಜ್ಯದ ಮೇಲೆ ನೇವಿುಸಲು ಉದ್ದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:3
12 ತಿಳಿವುಗಳ ಹೋಲಿಕೆ  

ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.


ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.


ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.


ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.


ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.


ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ವಿವೇಕಿಯು ಬೇಗನೆ ಕೋಪಗೊಳ್ಳುವುದಿಲ್ಲ.


ಆಗ ಬೆಳಕು ಕತ್ತಲೆಗಿಂತ ಉತ್ತಮವಾಗಿರುವಂತೆ ಜ್ಞಾನವು ಮೂಢತನಕ್ಕಿಂತ ಉತ್ತಮವಾಗಿದೆ ಎಂಬುದನ್ನು ಅರಿತುಕೊಂಡೆನು.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು