Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:4 - ಪರಿಶುದ್ದ ಬೈಬಲ್‌

4 ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:4
32 ತಿಳಿವುಗಳ ಹೋಲಿಕೆ  

ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)


ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.


ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಒಳ್ಳೆಯವರಿಗೆ ಯಥಾರ್ಥರಲ್ಲದವರು ಅಸಹ್ಯ. ಕೆಡುಕರು ಯಥಾರ್ಥರನ್ನು ದ್ವೇಷಿಸುವರು.


ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.


ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.


ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು.


ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.


ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.


ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.


ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.


ಇಸ್ರೇಲರು, “ಇಲ್ಲ, ನೀನು ನಮಗೆ ಕೆಟ್ಟದ್ದೇನನ್ನೂ ಮಾಡಿಲ್ಲ. ನೀನು ನಮ್ಮನ್ನು ಎಂದೂ ವಂಚಿಸಿಲ್ಲ; ನಮ್ಮಿಂದ ಏನನ್ನೂ ತೆಗೆದುಕೊಂಡಿಲ್ಲ” ಎಂದು ಉತ್ತರಿಸಿದರು.


ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು