Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:16 - ಪರಿಶುದ್ದ ಬೈಬಲ್‌

16 ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:16
14 ತಿಳಿವುಗಳ ಹೋಲಿಕೆ  

ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.


ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.


ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ.


ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


“ಈ ಕೊಂಬುಗಳೇನು?” ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು. ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿಹೋಗುವಂತೆ ಮಾಡಿವೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು