Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:2 - ಪರಿಶುದ್ದ ಬೈಬಲ್‌

2 ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು - ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾ ಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:2
13 ತಿಳಿವುಗಳ ಹೋಲಿಕೆ  

ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.


ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.


ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:


“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.


“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.


ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.


ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.


ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು.


ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.


ಸಮುದ್ರವು ಬಾಬಿಲೋನಿನ ಮೇಲೆ ನುಗ್ಗುವುದು. ಅದರ ಆರ್ಭಟಿಸುವ ತೆರೆಗಳು ಅದನ್ನು ಮುಚ್ಚಿಬಿಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು