Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:23 - ಪರಿಶುದ್ದ ಬೈಬಲ್‌

23 “ಅವನು ನನಗೆ ಈ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅವನು ನನಗೆ - ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ವಿುಕ್ಕ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:23
5 ತಿಳಿವುಗಳ ಹೋಲಿಕೆ  

ಆಮೇಲೆ ನಾಲ್ಕನೆಯ ರಾಜ್ಯ. ಆ ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ಆ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.


“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.


ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.


ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.


ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು