Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:5 - ಪರಿಶುದ್ದ ಬೈಬಲ್‌

5 “ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಹಾ, ಇನ್ನೊಂದು ಮೃಗ, ಎರಡನೇದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು, ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬಹು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:5
14 ತಿಳಿವುಗಳ ಹೋಲಿಕೆ  

“ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.


ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!


ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.


“ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.


“ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು