Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:19 - ಪರಿಶುದ್ದ ಬೈಬಲ್‌

19 “ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಕುರಿತಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:19
15 ತಿಳಿವುಗಳ ಹೋಲಿಕೆ  

ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.


ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.


ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಈ ಯೋಜನೆ.”


ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.


“ಆ ರಾಜ್ಯಗಳ ಅಂತ್ಯಕಾಲ ಸಮೀಪಿಸಿದಾಗ ಒಬ್ಬ ಧೈರ್ಯಶಾಲಿಯಾದ ಮತ್ತು ಕ್ರೂರನಾದ ಅರಸನು ತಲೆದೋರುವನು. ಈ ಅರಸನು ಬಹಳ ಕುತಂತ್ರಿಯಾಗಿರುವನು. ಅಧರ್ಮಿಗಳ ಮತ್ತು ಪಾಪಿಗಳ ಸಂಖ್ಯೆ ಹೆಚ್ಚಾದಾಗ ಇದೆಲ್ಲ ನಡೆಯುವುದು.


ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ


ನೀನು ಎದ್ದು ಚೀಯೋನನ್ನು ಸಂತೈಸುವೆ. ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು