Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:25 - ಪರಿಶುದ್ದ ಬೈಬಲ್‌

25 “ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:25
21 ತಿಳಿವುಗಳ ಹೋಲಿಕೆ  

ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


“‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.


“ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು