Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:26 - ಪರಿಶುದ್ದ ಬೈಬಲ್‌

26 “ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ; ಆದರೆ ಆ ಕನಸು ಗುಟ್ಟಾಗಿರಲಿ; ಅದು ಬಹು ದೂರದ ಕಾಲದ್ದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:26
11 ತಿಳಿವುಗಳ ಹೋಲಿಕೆ  

ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.


ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.


ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ.


“ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಬಹಳ ಕಾಲದ ನಂತರ ಅದು ನೆರವೇರುವುದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ.


ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.


ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.


“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು