Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:8 - ಪರಿಶುದ್ದ ಬೈಬಲ್‌

8 ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು; ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:8
19 ತಿಳಿವುಗಳ ಹೋಲಿಕೆ  

ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.


ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.


ಆ ಕೊಂಬು ಮುರಿಯಿತು; ಅದರ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಶಾಲಿಯಾಗಿರುವದಿಲ್ಲ.


ನಾನು ಈ ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದುಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು.


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.


“ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.


ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ.


ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ.


ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ.


ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.


ಮೊರ್ದೆಕೈ ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇದಿನೇ ಮೊರ್ದೆಕೈ ಬಲಶಾಲಿಯಾಗುತ್ತಾ ಬಂದನು.


ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.


ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.


ಹೋತವು ಟಗರಿನ ಕಡೆಗೆ ಓಡುವದನ್ನು ನಾನು ನೋಡುತ್ತಿದ್ದೆ. ಅದು ಅತಿ ಕೋಪದಿಂದ ಟಗರಿನ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಟಗರಿಗೆ ಆ ಹೋತವನ್ನು ತಡೆದು ನಿಲ್ಲಿಸಲಾಗಲಿಲ್ಲ. ಆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು. ಟಗರನ್ನು ಹೋತದಿಂದ ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು