Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:25 - ಪರಿಶುದ್ದ ಬೈಬಲ್‌

25 “ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:25
32 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.


ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)


ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)


ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.


“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.


ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.


ಅವರೆಲ್ಲಾ ಸೇರಿ ಜೆರುಸಲೇಮಿಗೆ ವಿರುದ್ಧವಾಗಿ ಗಲಭೆ ಎಬ್ಬಿಸುವ ಹಂಚಿಕೆಯನ್ನು ಹೂಡಿದರು; ಯುದ್ಧ ಮಾಡುವ ಯೋಚನೆ ಮಾಡಿದರು.


ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


“ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.


“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)


ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.


ನನ್ನ ಶತ್ರುಗಳು ಒಟ್ಟುಗೂಡಿ ನನ್ನನ್ನು ಕೊಲ್ಲಲು ಆಲೋಚಿಸಿಕೊಂಡಿದ್ದಾರೆ.


ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಎಜ್ರನು ಜೆರುಸಲೇಮನ್ನು ತಲುಪಿದನು.


ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.


ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವ ಹಾಗೆ ಯೆಹೋವನು ಮಾಡುತ್ತಾನೆ.


ಈ ದಿನಗಳು ಕೆಟ್ಟವುಗಳಾಗಿವೆ. ಆದ್ದರಿಂದ ನಿಮಗಿರುವ ಪ್ರತಿಯೊಂದು ಅವಕಾಶವನ್ನು ಒಳ್ಳೆಯದಕ್ಕಾಗಿ ಉಪಯೋಗಿಸಿರಿ.


ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.


“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.


ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.


ಕೊಲ್ಲುವ ಸಮಯ, ವಾಸಿಮಾಡುವ ಸಮಯ. ನಾಶಮಾಡುವ ಸಮಯ, ಕಟ್ಟುವ ಸಮಯ.


ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು