Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:26 - ಪರಿಶುದ್ದ ಬೈಬಲ್‌

26 ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:26
39 ತಿಳಿವುಗಳ ಹೋಲಿಕೆ  

ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.


ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ಯೇಸು, “ನೀವು ಈ ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?


ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


“ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


“ಪರಲೋಕರಾಜ್ಯವು ತನ್ನ ಮಗನ ಮದುವೆಯನ್ನು ಸಿದ್ಧಪಡಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.


ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”


ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.


ನೈಲ್ ನದಿಯಂತೆ ಯಾರು ಬರುತ್ತಿರುವರು? ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಯಾರು ಬರುತ್ತಿರುವರು?


ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.


ಈಗ ನಿನ್ನ ಮನೆಯು ಸಂರ್ಪೂಣವಾಗಿ ಬರಿದಾಗಿಬಿಟ್ಟಿದೆ.


ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.


ಸಮುದ್ರವು ಬಾಬಿಲೋನಿನ ಮೇಲೆ ನುಗ್ಗುವುದು. ಅದರ ಆರ್ಭಟಿಸುವ ತೆರೆಗಳು ಅದನ್ನು ಮುಚ್ಚಿಬಿಡುವವು.


ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.


ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲ ನಾಶಪಡಿಸಲು ಪ್ರಯತ್ನಿಸಿದನು.


ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.


ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು