Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:19 - ಪರಿಶುದ್ದ ಬೈಬಲ್‌

19 “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್‍ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:19
13 ತಿಳಿವುಗಳ ಹೋಲಿಕೆ  

ಹೋರೇಬ್ (ಸೀನಾಯಿ) ಬೆಟ್ಟದಿಂದ ಸೇಯೀರ್ ಬೆಟ್ಟದ ಮಾರ್ಗವಾಗಿ ಕಾದೇಶ್‌ಬರ್ನೇಯಕ್ಕೆ ತಲುಪಲು ಹನ್ನೊಂದು ದಿವಸದ ಪ್ರಯಾಣ ಮಾಡಬೇಕಾಗುತ್ತದೆ.


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.


“ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.


ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.


ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.


ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ.


ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.


ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನೀವೀಗ ಅಮೋರಿಯರ ಬೆಟ್ಟಪ್ರದೇಶಕ್ಕೆ ಬಂದಿರುವಿರಿ. ನಮ್ಮ ದೇವರಾದ ಯೆಹೋವನು ಈ ದೇಶವನ್ನು ನಮಗೆ ಕೊಡುವನು.


ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


ಆಶೇರ್ ಕುಲದಿಂದ ಮೀಕಾಯೇಲನ ಮಗನಾದ ಸೆತೂರ್,


ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.


ಯೆಹೋಶುವನು ಕಾದೇಶ್‌ಬರ್ನೇಯದಿಂದ ಗಾಜಾದವರೆಗಿನ ಎಲ್ಲ ಪಟ್ಟಣಗಳನ್ನು ಗೆದ್ದುಕೊಂಡನು. ಅವನು ಈಜಿಪ್ಟಿನ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೆ ಇದ್ದ ಎಲ್ಲ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು