Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:39 - ಪರಿಶುದ್ದ ಬೈಬಲ್‌

39 ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಒಳ್ಳೇದು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು; ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:39
7 ತಿಳಿವುಗಳ ಹೋಲಿಕೆ  

ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.


ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.


ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.


ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು.


ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು