Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:43 - ಪರಿಶುದ್ದ ಬೈಬಲ್‌

43 “ನಾನು ನಿಮ್ಮೊಂದಿಗೆ ಮಾತನಾಡಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ನೀವು ಯೆಹೋವನ ಆಜ್ಞೆಗೆ ವಿಧೇಯರಾಗಲು ಒಪ್ಪಲಿಲ್ಲ. ನೀವು ನಿಮ್ಮ ಸ್ವಂತ ಶಕ್ತಿಯಿಂದ ಜಯ ಹೊಂದುವುದಾಗಿ ಭಾವಿಸಿ ಬೆಟ್ಟಪ್ರದೇಶವನ್ನು ಏರಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 “ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಸರ್ವೇಶ್ವರನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರ ಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:43
8 ತಿಳಿವುಗಳ ಹೋಲಿಕೆ  

ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯೂ ಜನರೊಂದಿಗೆ ಹೋಗಲಿಲ್ಲ.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ. ಯೆಹೋವನು ವಾಗ್ದಾನ ಮಾಡಿರುವ ದೇಶಕ್ಕೆ ಹೋಗಲು ನಾವು ಈಗ ಸಿದ್ಧರಾಗಿದ್ದೇವೆ” ಎಂದು ಹೇಳಿದರು.


“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.


“ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.


“ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು