Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:8 - ಪರಿಶುದ್ದ ಬೈಬಲ್‌

8 ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:8
39 ತಿಳಿವುಗಳ ಹೋಲಿಕೆ  

ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.


ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು” ಎಂದು ಹೇಳಿದನು.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.


ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


“ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.


ನೀವು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ.


‘ಈಗ ಜೀವಿಸುತ್ತಿರುವ ದುಷ್ಟಜನರಾದ ನಿಮ್ಮಲ್ಲಿ ಯಾರೂ ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಒಳ್ಳೆಯನಾಡಿಗೆ ಹೋಗುವುದಿಲ್ಲ.


ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


“ದೇವರಾದ ಯೆಹೋವನು ನಮಗೆ ಈ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ್ದನು. ಈಗ ಆ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ.


ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.


“ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;


ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.


“ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


ಯೆಹೋವನು ನನಗೆ, ‘ನನ್ನ ಜನರನ್ನು ಪ್ರಯಾಣದಲ್ಲಿ ಮುನ್ನಡೆಸು; ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ಆ ದೇಶದಲ್ಲಿ ಅವರು ನೆಲೆಸಬೇಕು’ ಎಂದು ಹೇಳಿದನು.


ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.


ಅಲ್ಲಿ ಸೇವೆ ಮಾಡುತ್ತಿರುವ ಯಾಜಕನಿಗೆ, ‘ಯೆಹೋವನು ನನ್ನ ಪೂರ್ವಿಕರಿಗೆ ಒಂದು ದೇಶವನ್ನು ಕೊಡುವುದಾಗಿ ವಾಗ್ದಾನ ಮಾಡಿದನು. ನಾನು ಆ ದೇಶಕ್ಕೆ ಬಂದಿರುತ್ತೇನೆ’ ಎಂದು ಹೇಳಬೇಕು.


ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’


“ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”


ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು