Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:20 - ಪರಿಶುದ್ದ ಬೈಬಲ್‌

20 “ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:20
20 ತಿಳಿವುಗಳ ಹೋಲಿಕೆ  

ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.


ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.


ಅದಕ್ಕೆ ಯೇಸು, “‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು’ ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.


“ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.


ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


‘ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.


ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”


ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು