Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:13 - ಪರಿಶುದ್ದ ಬೈಬಲ್‌

13 ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ನೀವು ಬಲಿಯನ್ನು ಅರ್ಪಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ದಹನಬಲಿಗಳನ್ನು ಸಮರ್ಪಿಸಬಾರದು. ಎಚ್ಚರಿಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಕಂಡ ಎಲ್ಲಾ ಸ್ಥಳಗಳಲ್ಲಿ ನಿಮ್ಮ ದಹನಬಲಿಗಳನ್ನು ಅರ್ಪಿಸದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:13
11 ತಿಳಿವುಗಳ ಹೋಲಿಕೆ  

ಆದರೂ ಯೆಹೂದದ ಎಲ್ಲಾ ಉನ್ನತಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ತನಗಿಂತ ಮುಂಚೆ ಆಳಿದ ಇಸ್ರೇಲಿನ ರಾಜನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.


“ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.


ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು