Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:28 - ಪರಿಶುದ್ದ ಬೈಬಲ್‌

28 ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು ಅವುಗಳನ್ನು ಅನುಸರಿಸಿ ನಿಮ್ಮ ದೇವರಾದ ಯೆಹೋವನಿಗೆ ಒಳ್ಳೇದೂ ಯುಕ್ತವೂ ಆಗಿರುವದನ್ನು ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡುವುದರಿಂದ ನಿಮಗೂ ನಿಮ್ಮ ಮುಂದೆ ಇರುವ ನಿಮ್ಮ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವ ಹಾಗೆ ನಾನು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:28
15 ತಿಳಿವುಗಳ ಹೋಲಿಕೆ  

ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ನಾನು ನಿಮಗೆ ಹೇಳಿದ ಉಪದೇಶದಿಂದ ನೀವು ಈಗಾಗಲೇ ಶುದ್ಧರಾಗಿದ್ದೀರಿ.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.


ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.


ಸೊಲೊಮೋನನೇ, ನಿನ್ನ ತಂದೆಯಾದ ದಾವೀದನು ಹೇಗೆ ಜೀವಿಸಿದನೋ ಅದೇ ಪ್ರಕಾರ ನೀನು ನನ್ನೆದುರಿನಲ್ಲಿ ಜೀವಿಸಿ, ನನ್ನ ಅಪ್ಪಣೆಗಳನ್ನು ಕೈಕೊಂಡು, ನನ್ನ ವಿಧಿನಿಯಮಗಳಿಗೆ ವಿಧೇಯನಾಗುವದಾದರೆ,


“ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.


ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


“ನೀವು ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಬೇಕು; ಅವುಗಳಿಗೆ ವಿಧೇಯರಾಗಬೇಕು. ನಾನೇ ಯೆಹೋವನು.”


ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.


ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು