Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:3 - ಪರಿಶುದ್ದ ಬೈಬಲ್‌

3 ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:3
25 ತಿಳಿವುಗಳ ಹೋಲಿಕೆ  

ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ನಾನು ನಿನ್ನ ಅಶೇರ ಸ್ತಂಭಗಳನ್ನೂ ಸುಳ್ಳು ದೇವರುಗಳನ್ನೂ ನಾಶಮಾಡುವೆನು.


ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ.


ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.


ಅವನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರ್ಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು.


ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.


ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.


ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.


ಮೂರ್ತಿಪೂಜೆಗಾಗಿ ಮಾಡಿದ ಯಜ್ಞವೇದಿಕೆಗಳನ್ನು ತೆಗೆದುಹಾಕಿಸಿದನು. ವಿಗ್ರಹಾರಾಧಕರ ಪೂಜಾಸ್ಥಳಗಳನ್ನು, ಸ್ಮಾರಕಕಲ್ಲುಗಳನ್ನು ಒಡೆದು ಹಾಳುಮಾಡಿಸಿದನು. ಅಶೇರಸ್ತಂಭಗಳನ್ನು ತುಂಡು ಮಾಡಿಸಿದನು.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


“ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು.


ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.


ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು