Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:5 - ಪರಿಶುದ್ದ ಬೈಬಲ್‌

5 ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:5
50 ತಿಳಿವುಗಳ ಹೋಲಿಕೆ  

ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ.


ಆ ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು, “ಸೊಲೊಮೋನನೇ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ. ನಾನು ಈ ಆಲಯವನ್ನು ಯಜ್ಞಾಲಯಕ್ಕಾಗಿ ಆರಿಸಿಕೊಂಡಿರುತ್ತೇನೆ.


ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.


‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.


ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ನೀವು ಬಲಿಯನ್ನು ಅರ್ಪಿಸಬೇಡಿ.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


“ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು.


‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.


ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


“ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು.


ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.


ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.


ಒಂದುವೇಳೆ ಆ ವಿಶೇಷ ಸ್ಥಳವು ನೀವು ಪ್ರಯಾಣ ಮಾಡಲಾರದಷ್ಟು ದೂರವಾಗಿದ್ದರೆ, ಯೆಹೋವನು ಆಶೀರ್ವದಿಸಿದ ನಿಮ್ಮ ಎಲ್ಲಾ ಬೆಳೆಗಳಲ್ಲಿ ದಶಾಂಶವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಾಗದಿದ್ದಲ್ಲಿ,


ಪ್ರತಿ ವರ್ಷ, ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು.


ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.


“ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.


ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.


ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು.


ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.


ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.


ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.


ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.


ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!


“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.


ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.


ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.


“ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು