ಧರ್ಮೋಪದೇಶಕಾಂಡ 13:17 - ಪರಿಶುದ್ದ ಬೈಬಲ್17 ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17-18 ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ, ಅಧ್ಯಾಯವನ್ನು ನೋಡಿ |
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.
ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.