Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:18 - ಪರಿಶುದ್ದ ಬೈಬಲ್‌

18 ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವು ಹೀಗೆ ನಡೆದು, ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಅವರ ಎಲ್ಲ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ, ಅವರು ರೋಷಾಗ್ನಿಯನ್ನು ತಡೆದು, ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸುವರು; ತಾವು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಅಭಿವೃದ್ಧಿಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:18
12 ತಿಳಿವುಗಳ ಹೋಲಿಕೆ  

ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.


ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


“ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.


ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು