Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:21 - ಪರಿಶುದ್ದ ಬೈಬಲ್‌

21 “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:21
19 ತಿಳಿವುಗಳ ಹೋಲಿಕೆ  

“ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”


“ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.”


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!


“ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.


ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ಆದರೆ ನೀವು ಶುದ್ಧವಾದ ಯಾವ ಪಕ್ಷಿಯನ್ನು ಬೇಕಾದರೂ ತಿನ್ನಬಹುದು.


ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.


ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು