Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:22 - ಪರಿಶುದ್ದ ಬೈಬಲ್‌

22 “ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:22
13 ತಿಳಿವುಗಳ ಹೋಲಿಕೆ  

“ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.


“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


“ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.


ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.


ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.


ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.


ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು