Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:29 - ಪರಿಶುದ್ದ ಬೈಬಲ್‌

29 ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:29
30 ತಿಳಿವುಗಳ ಹೋಲಿಕೆ  

“ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.


ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲುಕೊಡಿರಿ. ಯಾಕೆಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ತ್ಯ ದೊರಕುವುದಿಲ್ಲ.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.


ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.


ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.


ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ತ್ಯವು ದೊರಕಲಿಲ್ಲ. ಅವರ ಸ್ವಾಸ್ತ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.)


ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.


“ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು