Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:14 - ಪರಿಶುದ್ದ ಬೈಬಲ್‌

14 ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು, ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸಿದ್ದಾನೆ. ಆದ್ದರಿಂದ ನಿಮ್ಮ ಗುಲಾಮರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸಧಾನ್ಯ, ದ್ರಾಕ್ಷರಸ ಇವುಗಳಲ್ಲಿ ಉದಾರವಾಗಿ ಕೊಟ್ಟುಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸ, ದ್ರಾಕ್ಷಾರಸ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:14
8 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರೀಗೈಯಲ್ಲಿ ಕಳುಹಿಸಬಾರದು.


ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು