Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:17 - ಪರಿಶುದ್ದ ಬೈಬಲ್‌

17 ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು. ಆ ದಿನ ಮೊದಲ್ಗೊಂಡು ಅವನು ನಿಮಗೆ ಶಾಶ್ವತ ಗುಲಾಮನಾಗಿರುತ್ತಾನೆ. ಅದೇ ರೀತಿಯಲ್ಲಿ ಗುಲಾಮಸ್ತ್ರೀಯರ ವಿಷಯದಲ್ಲೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ದಿನ ಮೊದಲುಗೊಂಡು ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಲ್ಲಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:17
6 ತಿಳಿವುಗಳ ಹೋಲಿಕೆ  

ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.


“ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದದೆ ಇಲ್ಲೇ ಇರುವೆನು’ ಎಂದು ಹೇಳಬೇಕು.


ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.


“ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ,


“ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು